ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್’ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಪಡಿತರ ಚೀಟಿದಾರರು ಮತ್ತೆ ತಿದ್ದುಪಡಿಗೆ (Ration Card Updates) ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಂಚಿಕೊಂಡಿದೆ. ರೇಷನ್ ಕಾಡ್’ðದಾರರು ಈ ಅವಕಾಶ ಬಳಸಿಕೊಳ್ಳಲು ಕೋರಲಾಗಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ವರ್ಷಗಳಿಂದ ಅವಕಾಶ ಕಲ್ಪಿಸಿಲ್ಲ. ಕೊನೆ ಪಕ್ಷ ತಿದ್ದುಪಡಿಗಾದರೂ ಹೆಚ್ಚಿನ ಸಮಯಾವಕಾಶ ನೀಡುವಂತೆ ಜನರಿಂದ ಆಕ್ರೋಶ ವ್ಯಕ್ತವಾಗುತ್ತ ಬಂದಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಎಪಿಎಲ್ (APL Card), ಬಿಪಿಎಲ್ (BPL Card) ಹಾಗೂ ಅಂತ್ಯೋದಯ ಪಡಿತರ ಕಾರ್ಡ್ (Anthyodaya Card) ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ.
ಇಂದಿನಿಂದದ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜನವರಿ 31ರ ವರೆಗೆ ಪ್ರತಿದಿನ ಬೆಳಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯ ವರೆಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಬೆಂಗಳೂರು ಒನ್ (Bangalore One), ಕರ್ನಾಟಕ ಒನ್ (karnataka One) ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ (Grama One Center) ಪಡಿತರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.
ಫಲಾನುಭವಿಗಳು ರೇಷನ್ ಕಾರ್ಡಿನನಲ್ಲಿ ಈ ಕೆಳಗಿನ ತಿದ್ದುಪಡಿ ಹಾಗೂ ಬದಲಾವಣೆಯನ್ನು ಮಾಡಿಸಿಕೊಳ್ಳಬಹುದು.
* ಕುಟುಂಬ ಮುಖ್ಯಸ್ಥರ ಬದಲಾವಣೆ
* ಹೊಸ ಸದಸ್ಯರ ಸೇರ್ಪಡೆ
* ಹೆಸರು ತಿದ್ದುಪಡಿ
* ಹೆಸರು ತೆಗೆಯುವುದು
* ಪೋಟೊ ಬದಲಾವಣೆ
* ಇ-ಕೆವೈಸಿ ಅಪ್ಡೇಟ್ ಹಾಗೂ ಇತರ ಸೇವೆಗಳು
* ಪ್ರಸ್ತುತ ಇರುವ ರೇಷನ್ ಕಾರ್ಡ್ ಪ್ರತಿ
* ಕುಟುಂಬ ಸದಸ್ಯರ ಆಧಾರ್ ಕಾರ್ಡ್
* ಹೊಸ ಹೆಸರು ಸೇರ್ಪಡೆಗೆ ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ
* ತೀರಿಹೋದ ಹಿರಿಯರ ಮರಣ ಪ್ರಮಾಣ ಪತ್ರ
* ಮೊಬೈಲ್ ನಂಬರ್
ರೇಷನ್ ಕಾರ್ಡ್ನಲ್ಲಿನ ತಿದ್ದುಪಡಿಗಾಗಿ ಗ್ರಾಮ ಒನ್, ಕಾಮನ್ ಸರ್ವೀಸ್ ಸೆಂಟರ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಜನವರಿ 31ರ ವರೆಗೂ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ವರೆಗೆ ಅರ್ಜಿದಾರರು ತಿದ್ದುಪಡಿ ಕೇಂದ್ರಗಳಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಬಹುದಾಗಿದೆ.